May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!