24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಇಲ್ಲಿನ ಶಿಕ್ಷಣ ಸಂಸ್ಥೆಗಳ ದಿನಾಚರಣೆಯು ಇತ್ತೀಚೆಗೆ ನಡೆಯಿತು.

ಬೆಳಿಗ್ಗೆ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆಯನ್ನು ನೀಡಲಾಯಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜೆ.ಆರ್ ಲೋಬೋ ನಾರಾವಿ ಎಂಬ ಗ್ರಾಮೀಣ ಪರಿಸರದಲ್ಲಿ ಶಿಕ್ಷಣದ ಕೊರತೆಯನ್ನು ನೀಗಿಸಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಯನ್ನು ಕೊಂಡಾಡಿದರು.

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀಮತಿ ಫಿಲೋಮಿನಾ ಲೋಬೊ ವೇದಿಕೆಯಲ್ಲಿದ್ದರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ.ಸ್ವಾಮಿ ಜೆರೋಮ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಶ್ರೀಮತಿ ಎವ್ಜಿನ್ ರೋಡ್ರಿಗಸ್, ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರು ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ವಂದನೀಯ ಡಾ. ಆಲ್ವಿನ್ ಸೆರಾವೋ ಸ್ವಾಗತಿಸಿದರು.ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿ, ಪದವಿ ಕಾಲೇಜಿನ ಉಪ ಪ್ರಾoಶುಪಾಲ ಸಂತೋಷ್ ಸಲ್ದಾನ ಧನ್ಯವಾದವಿತ್ತರು.

Related posts

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya
error: Content is protected !!