July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12ರಂದು 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವು ಸೇಕ್ರೆಡ್ ಹಾರ್ಟ್ ಕೆಳ ಅಂತಸ್ತಿನ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ರವರು ವಹಿಸಿ ಮಾತನಾಡಿ ನಾವು ಜೀವನದಲ್ಲಿ ಗೆಲ್ಲುವುದು ಸೋಲುವುದು ಸಹಜ, ಗೆದ್ದವರು ಪ್ರಶಸ್ತಿಯನ್ನು ಪಡೆಯುತ್ತಾರೆ, ಸೋತವರು ಜೀವನದಲ್ಲಿ ಒಂದು ಪಾಠವನ್ನು ಕಲಿಯುತ್ತಾರೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದಯಾ ವಿಶೇಷ ಶಾಲೆ, ಉಜಿರೆಯ ನಿರ್ದೇಶಕರಾದ ವಂ|ಸ್ವಾ| ವಿನೋದ್ ಮಸ್ಕರೇನಸ್ ಮಾತನಾಡಿ, ನಾವು ಜೀವನದಲ್ಲಿ ಕನಸು ಕಾಣಬೇಕು ಅದನ್ನು ನನಸುಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಆಶಾ ದೀಪ ಸೆಮಿನಾರಿಯ ಬ್ರದರ್ ಅಲ್ಡ್ರಿಕ್ ಕ್ಸೇವಿಯರ್ ರವರು,ಸೇಕ್ರೆಡ್ ಹಾರ್ಟ್ ಕಾನ್ವೆಂಟ್ ನ ನಿರ್ದೇಶಕಿಯಾದ ಸಿಸ್ಟರ್ ಅಮಿತಾರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲಾಸ್ಯ ಮತ್ತು ಮಾನ್ವಿತಾ ನಾಯಕ್ ರವರು ನಿರೂಪಿಸಿ, ಇಚ್ಚ ಶೆಟ್ಟಿಸ್ವಾಗತಿಸಿ, ಮನಸ್ವಿರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya
error: Content is protected !!