24.7 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ಉಜಿರೆ: ಬೆಳ್ತಂಗಡಿಯ ವಾಣಿ ಪಿ.ಯು ಕಾಲೇಜಿನಲ್ಲಿ ಡಿ.11 ರಂದು ನಡೆದ ” ವಿಂಶತಿ ” ಸಂಭ್ರಮದ ಆಚರಣೆ ಅಂಗವಾಗಿ ನಡೆದ ‘ ಉತ್ಕರ್ಷ 2024’ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


‘ ನಿಧಿ ವಿಹಾರ ’ ಸ್ಪರ್ಧೆಯಲ್ಲಿ ಸಂಜನ್ ಮತ್ತು ಪವಿಶ್ ಪ್ರಥಮ ಸ್ಥಾನ. ವರ್ತಿಕ’ (ವರದಿಗಾರಿಕೆ) ಸ್ಪರ್ಧೆಯಲ್ಲಿ ದಿಶಾನ್ ಮತ್ತು ಸಪ್ತಮಿ ಪ್ರಥಮ ಸ್ಥಾನ ಗಳಿಸಿದ್ದು, ಪ್ರವಲ್, ಸಮರ್ಥ್, ವಿಘ್ನೇಶ್, ಸಮರ್ಥ್ ಭಟ್ ಸುಪರ್ ಮಿನಿಟ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಗೆದ್ದು ಕೊಂಡಿದ್ದಾರೆ.

ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಅಕ್ಷರ್ ಮತ್ತು ಸಚಿತ್ ಭಟ್ ತೃತೀಯ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ಮಧು ಶ್ರೀ ಮತ್ತು ದೀಪಿಕ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿಯವರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Related posts

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!