23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.

ಉಪಾಧ್ಯಕ್ಷ ಪೂರ್ಣಾಕ್ಷ


ಪುದುವೆಟ್ಟು ಗ್ರಾಮ ಪಂಚಾಯತದಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಶ್ರೀಮತಿ ಅನಿತಾ ಕುಮಾರಿ ಅವರು ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ.20ರಂದು ಪುತ್ತೂರು ಎ.ಸಿಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು.

ಇಂದು, ಡಿ.12ರಂದು ಬೆಳಿಗ್ಗೆ ಪುತ್ತೂರು ಸಹಾಯಕ ಕಮೀಷನರ್ ಅವರು ಉಪಸ್ಥಿತಿಯಲ್ಲಿ ಅವಿಶ್ವಾಸ ಸೂಚನೆ ನಿರ್ಣಯ ಸಭೆ ನಡೆಯಿತು. ಅಧ್ಯಕ್ಷರ ವಿರುದ್ಧ 7 ಮಂದಿ ಹಾಗೂ ಅಧ್ಯಕ್ಷರ ಪರ ಒಬ್ಬರು ಕೈ ಎತ್ತಿ ಬೆಂಬಲ ಸೂಚಿಸಿದರು. ಇದರಿಂದಾಗಿ ಅಧ್ಯಕ್ಷ ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.
ಉಪಾಧ್ಯಕ್ಷ ಸ್ಥಾನದಲ್ಲಿದ್ದ ಪೂರ್ಣಾಕ್ಷ ರವರು ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Related posts

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya
error: Content is protected !!