28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳಗಾವಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ಇಂದಿಗೂ ಚಿಮಿಣಿ ದೀಪದಲ್ಲಿ ಜೀವಿಸುಂತಾಗಿದೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು. ಜೊತೆಗೆ ಇತರ ಆದಿವಾಸಿ ಕಾಲನಿಗಳೂ ಮೂಲಭೂತ ಸೌಕರ್ಯ ವಂಚಿತವಾಗಿದೆ. ಇದಕ್ಕಾಗಿ ವಿಶೇಷ ಅನುದಾನ ಬೆಳ್ತಂಗಡಿ ತಾಲೂಕಿಗೆ ಬಿಡುಗಡೆ ಮಾಡಲು ವಿನಂತಿಸಿದರು. ಇದೇ ಸಂದರ್ಭದಲ್ಲಿ ಈಗಾಗಲೇ ರಾಜ್ಯದ ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!