25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದವರ ಮೇಲೆ ವ್ಯಕ್ತಿಯೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ಡಿ.11 ರಂದು ನಡೆದಿದೆ.

ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಪಡಂಗಡಿ ನಿವಾಸಿ ದಾವೂದ್ ಎಂಬವರು ಇಕ್ಬಾಲ್ ಅವರಿಗೆ ರೂ 50 ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಸಂಜೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ ಕರೆದಿದ್ದಾನೆ. ಈ ವೇಳೆ ಮನೆಯಿಂದ ತಲ್ವಾರ್ ನೊಂದಿಗೆ ಹೊರ ಬಂದ ಆರೋಪಿ ದಾವೂದ್ ನ ತಲೆಗೆ ಕಡಿದಿರುವುದಾಗಿ ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಕಲಂ 109 BNS-2023 ರಂತೆ ಪ್ರಕರಣ ದಾಖಲಾಗಿದೆ.

Related posts

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!