24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದವರ ಮೇಲೆ ವ್ಯಕ್ತಿಯೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ಡಿ.11 ರಂದು ನಡೆದಿದೆ.

ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಪಡಂಗಡಿ ನಿವಾಸಿ ದಾವೂದ್ ಎಂಬವರು ಇಕ್ಬಾಲ್ ಅವರಿಗೆ ರೂ 50 ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಸಂಜೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ ಕರೆದಿದ್ದಾನೆ. ಈ ವೇಳೆ ಮನೆಯಿಂದ ತಲ್ವಾರ್ ನೊಂದಿಗೆ ಹೊರ ಬಂದ ಆರೋಪಿ ದಾವೂದ್ ನ ತಲೆಗೆ ಕಡಿದಿರುವುದಾಗಿ ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಕಲಂ 109 BNS-2023 ರಂತೆ ಪ್ರಕರಣ ದಾಖಲಾಗಿದೆ.

Related posts

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!