25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!