28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಇಲ್ಲಿನ ಶಿಕ್ಷಣ ಸಂಸ್ಥೆಗಳ ದಿನಾಚರಣೆಯು ಇತ್ತೀಚೆಗೆ ನಡೆಯಿತು.

ಬೆಳಿಗ್ಗೆ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆಯನ್ನು ನೀಡಲಾಯಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜೆ.ಆರ್ ಲೋಬೋ ನಾರಾವಿ ಎಂಬ ಗ್ರಾಮೀಣ ಪರಿಸರದಲ್ಲಿ ಶಿಕ್ಷಣದ ಕೊರತೆಯನ್ನು ನೀಗಿಸಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಯನ್ನು ಕೊಂಡಾಡಿದರು.

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಶ್ರೀಮತಿ ಫಿಲೋಮಿನಾ ಲೋಬೊ ವೇದಿಕೆಯಲ್ಲಿದ್ದರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ.ಸ್ವಾಮಿ ಜೆರೋಮ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಶ್ರೀಮತಿ ಎವ್ಜಿನ್ ರೋಡ್ರಿಗಸ್, ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರು ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ವಂದನೀಯ ಡಾ. ಆಲ್ವಿನ್ ಸೆರಾವೋ ಸ್ವಾಗತಿಸಿದರು.ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿ, ಪದವಿ ಕಾಲೇಜಿನ ಉಪ ಪ್ರಾoಶುಪಾಲ ಸಂತೋಷ್ ಸಲ್ದಾನ ಧನ್ಯವಾದವಿತ್ತರು.

Related posts

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya
error: Content is protected !!