May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya
error: Content is protected !!