24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12ರಂದು 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವು ಸೇಕ್ರೆಡ್ ಹಾರ್ಟ್ ಕೆಳ ಅಂತಸ್ತಿನ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ರವರು ವಹಿಸಿ ಮಾತನಾಡಿ ನಾವು ಜೀವನದಲ್ಲಿ ಗೆಲ್ಲುವುದು ಸೋಲುವುದು ಸಹಜ, ಗೆದ್ದವರು ಪ್ರಶಸ್ತಿಯನ್ನು ಪಡೆಯುತ್ತಾರೆ, ಸೋತವರು ಜೀವನದಲ್ಲಿ ಒಂದು ಪಾಠವನ್ನು ಕಲಿಯುತ್ತಾರೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದಯಾ ವಿಶೇಷ ಶಾಲೆ, ಉಜಿರೆಯ ನಿರ್ದೇಶಕರಾದ ವಂ|ಸ್ವಾ| ವಿನೋದ್ ಮಸ್ಕರೇನಸ್ ಮಾತನಾಡಿ, ನಾವು ಜೀವನದಲ್ಲಿ ಕನಸು ಕಾಣಬೇಕು ಅದನ್ನು ನನಸುಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಆಶಾ ದೀಪ ಸೆಮಿನಾರಿಯ ಬ್ರದರ್ ಅಲ್ಡ್ರಿಕ್ ಕ್ಸೇವಿಯರ್ ರವರು,ಸೇಕ್ರೆಡ್ ಹಾರ್ಟ್ ಕಾನ್ವೆಂಟ್ ನ ನಿರ್ದೇಶಕಿಯಾದ ಸಿಸ್ಟರ್ ಅಮಿತಾರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲಾಸ್ಯ ಮತ್ತು ಮಾನ್ವಿತಾ ನಾಯಕ್ ರವರು ನಿರೂಪಿಸಿ, ಇಚ್ಚ ಶೆಟ್ಟಿಸ್ವಾಗತಿಸಿ, ಮನಸ್ವಿರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya
error: Content is protected !!