22.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.

ಉಪಾಧ್ಯಕ್ಷ ಪೂರ್ಣಾಕ್ಷ


ಪುದುವೆಟ್ಟು ಗ್ರಾಮ ಪಂಚಾಯತದಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಶ್ರೀಮತಿ ಅನಿತಾ ಕುಮಾರಿ ಅವರು ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ.20ರಂದು ಪುತ್ತೂರು ಎ.ಸಿಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು.

ಇಂದು, ಡಿ.12ರಂದು ಬೆಳಿಗ್ಗೆ ಪುತ್ತೂರು ಸಹಾಯಕ ಕಮೀಷನರ್ ಅವರು ಉಪಸ್ಥಿತಿಯಲ್ಲಿ ಅವಿಶ್ವಾಸ ಸೂಚನೆ ನಿರ್ಣಯ ಸಭೆ ನಡೆಯಿತು. ಅಧ್ಯಕ್ಷರ ವಿರುದ್ಧ 7 ಮಂದಿ ಹಾಗೂ ಅಧ್ಯಕ್ಷರ ಪರ ಒಬ್ಬರು ಕೈ ಎತ್ತಿ ಬೆಂಬಲ ಸೂಚಿಸಿದರು. ಇದರಿಂದಾಗಿ ಅಧ್ಯಕ್ಷ ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.
ಉಪಾಧ್ಯಕ್ಷ ಸ್ಥಾನದಲ್ಲಿದ್ದ ಪೂರ್ಣಾಕ್ಷ ರವರು ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!