April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.

ಉಪಾಧ್ಯಕ್ಷ ಪೂರ್ಣಾಕ್ಷ


ಪುದುವೆಟ್ಟು ಗ್ರಾಮ ಪಂಚಾಯತದಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಶ್ರೀಮತಿ ಅನಿತಾ ಕುಮಾರಿ ಅವರು ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ.20ರಂದು ಪುತ್ತೂರು ಎ.ಸಿಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು.

ಇಂದು, ಡಿ.12ರಂದು ಬೆಳಿಗ್ಗೆ ಪುತ್ತೂರು ಸಹಾಯಕ ಕಮೀಷನರ್ ಅವರು ಉಪಸ್ಥಿತಿಯಲ್ಲಿ ಅವಿಶ್ವಾಸ ಸೂಚನೆ ನಿರ್ಣಯ ಸಭೆ ನಡೆಯಿತು. ಅಧ್ಯಕ್ಷರ ವಿರುದ್ಧ 7 ಮಂದಿ ಹಾಗೂ ಅಧ್ಯಕ್ಷರ ಪರ ಒಬ್ಬರು ಕೈ ಎತ್ತಿ ಬೆಂಬಲ ಸೂಚಿಸಿದರು. ಇದರಿಂದಾಗಿ ಅಧ್ಯಕ್ಷ ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.
ಉಪಾಧ್ಯಕ್ಷ ಸ್ಥಾನದಲ್ಲಿದ್ದ ಪೂರ್ಣಾಕ್ಷ ರವರು ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Related posts

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!