28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳಗಾವಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ಇಂದಿಗೂ ಚಿಮಿಣಿ ದೀಪದಲ್ಲಿ ಜೀವಿಸುಂತಾಗಿದೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು. ಜೊತೆಗೆ ಇತರ ಆದಿವಾಸಿ ಕಾಲನಿಗಳೂ ಮೂಲಭೂತ ಸೌಕರ್ಯ ವಂಚಿತವಾಗಿದೆ. ಇದಕ್ಕಾಗಿ ವಿಶೇಷ ಅನುದಾನ ಬೆಳ್ತಂಗಡಿ ತಾಲೂಕಿಗೆ ಬಿಡುಗಡೆ ಮಾಡಲು ವಿನಂತಿಸಿದರು. ಇದೇ ಸಂದರ್ಭದಲ್ಲಿ ಈಗಾಗಲೇ ರಾಜ್ಯದ ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!