25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದವರ ಮೇಲೆ ವ್ಯಕ್ತಿಯೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ಡಿ.11 ರಂದು ನಡೆದಿದೆ.

ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಪಡಂಗಡಿ ನಿವಾಸಿ ದಾವೂದ್ ಎಂಬವರು ಇಕ್ಬಾಲ್ ಅವರಿಗೆ ರೂ 50 ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಸಂಜೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ ಕರೆದಿದ್ದಾನೆ. ಈ ವೇಳೆ ಮನೆಯಿಂದ ತಲ್ವಾರ್ ನೊಂದಿಗೆ ಹೊರ ಬಂದ ಆರೋಪಿ ದಾವೂದ್ ನ ತಲೆಗೆ ಕಡಿದಿರುವುದಾಗಿ ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಕಲಂ 109 BNS-2023 ರಂತೆ ಪ್ರಕರಣ ದಾಖಲಾಗಿದೆ.

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya
error: Content is protected !!