25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya
error: Content is protected !!