24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya
error: Content is protected !!