28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya
error: Content is protected !!