25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
error: Content is protected !!