25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12ರಂದು 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವು ಸೇಕ್ರೆಡ್ ಹಾರ್ಟ್ ಕೆಳ ಅಂತಸ್ತಿನ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ರವರು ವಹಿಸಿ ಮಾತನಾಡಿ ನಾವು ಜೀವನದಲ್ಲಿ ಗೆಲ್ಲುವುದು ಸೋಲುವುದು ಸಹಜ, ಗೆದ್ದವರು ಪ್ರಶಸ್ತಿಯನ್ನು ಪಡೆಯುತ್ತಾರೆ, ಸೋತವರು ಜೀವನದಲ್ಲಿ ಒಂದು ಪಾಠವನ್ನು ಕಲಿಯುತ್ತಾರೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದಯಾ ವಿಶೇಷ ಶಾಲೆ, ಉಜಿರೆಯ ನಿರ್ದೇಶಕರಾದ ವಂ|ಸ್ವಾ| ವಿನೋದ್ ಮಸ್ಕರೇನಸ್ ಮಾತನಾಡಿ, ನಾವು ಜೀವನದಲ್ಲಿ ಕನಸು ಕಾಣಬೇಕು ಅದನ್ನು ನನಸುಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಆಶಾ ದೀಪ ಸೆಮಿನಾರಿಯ ಬ್ರದರ್ ಅಲ್ಡ್ರಿಕ್ ಕ್ಸೇವಿಯರ್ ರವರು,ಸೇಕ್ರೆಡ್ ಹಾರ್ಟ್ ಕಾನ್ವೆಂಟ್ ನ ನಿರ್ದೇಶಕಿಯಾದ ಸಿಸ್ಟರ್ ಅಮಿತಾರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲಾಸ್ಯ ಮತ್ತು ಮಾನ್ವಿತಾ ನಾಯಕ್ ರವರು ನಿರೂಪಿಸಿ, ಇಚ್ಚ ಶೆಟ್ಟಿಸ್ವಾಗತಿಸಿ, ಮನಸ್ವಿರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!