May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಧರ್ಮಸ್ಥಳ ಪುದುವೆಟ್ಟು ಗ್ರಾಮದ ಶಾಂತಿನಗರ ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ಶ್ರೀ ಕ್ಷೇತ್ರದ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ 1ಲಕ್ಷ ರೂಪಾಯಿ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀಮಹಾಗಣಪತಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಗೌಡ, ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷ ದೇವಣ್ಣ ಗೌಡ ಬೊಲ್ಮನಾರು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮನಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಭಜನಾ ಮಂದಿರದ ಅರ್ಚಕರಾದ ಬಾಬು ಗೌಡ,ಹಾಗೂ ಭಜನಾ ಮಂಡಳಿಯ ಎಲ್ಲ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ಶೇಖರ ಗೌಡ ಶಾಂತ್ಯಾಯ ನಿರ್ವಹಿಸಿದರು, ರಮೇಶ್ ಸಾಲ್ಯಾನ್ ಸ್ವಾಗತಿಸಿದರು, ಭಜನಾ ಮಂದಿರದ ವರದಿ ವಾಚನವನ್ನು ಹರೀಶ್ ಪಟ್ಲರವರು ನಿರ್ವಹಿಸಿದರು,

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya
error: Content is protected !!