24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಧರ್ಮಸ್ಥಳ ಪುದುವೆಟ್ಟು ಗ್ರಾಮದ ಶಾಂತಿನಗರ ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ಶ್ರೀ ಕ್ಷೇತ್ರದ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ 1ಲಕ್ಷ ರೂಪಾಯಿ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀಮಹಾಗಣಪತಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಗೌಡ, ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷ ದೇವಣ್ಣ ಗೌಡ ಬೊಲ್ಮನಾರು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮನಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಭಜನಾ ಮಂದಿರದ ಅರ್ಚಕರಾದ ಬಾಬು ಗೌಡ,ಹಾಗೂ ಭಜನಾ ಮಂಡಳಿಯ ಎಲ್ಲ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ಶೇಖರ ಗೌಡ ಶಾಂತ್ಯಾಯ ನಿರ್ವಹಿಸಿದರು, ರಮೇಶ್ ಸಾಲ್ಯಾನ್ ಸ್ವಾಗತಿಸಿದರು, ಭಜನಾ ಮಂದಿರದ ವರದಿ ವಾಚನವನ್ನು ಹರೀಶ್ ಪಟ್ಲರವರು ನಿರ್ವಹಿಸಿದರು,

Related posts

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!