September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.

ಉಪಾಧ್ಯಕ್ಷ ಪೂರ್ಣಾಕ್ಷ


ಪುದುವೆಟ್ಟು ಗ್ರಾಮ ಪಂಚಾಯತದಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ ಶ್ರೀಮತಿ ಅನಿತಾ ಕುಮಾರಿ ಅವರು ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತ್ತಿಚೀನ ದಿನಗಳಲ್ಲಿ ನಡೆದ ಕೆಲವೊಂದು ಬೆಳವಣಿಗೆಯಲ್ಲಿ ಅಧ್ಯಕ್ಷರ ವಿರುದ್ಧ ಅವರದೇ ಪಕ್ಷ ಬೆಂಬಲಿತ ಸದಸ್ಯರು ಅಸಮಾಧಾನಗೊಂಡು, ಅಧ್ಯಕ್ಷರ ಪದಚ್ಯುತಿಗೆ ನ.20ರಂದು ಪುತ್ತೂರು ಎ.ಸಿಯವರಿಗೆ ಅವಿಶ್ವಾಸ ಸೂಚನಾ ಪತ್ರ ಸಲ್ಲಿಸಿದ್ದರು.

ಇಂದು, ಡಿ.12ರಂದು ಬೆಳಿಗ್ಗೆ ಪುತ್ತೂರು ಸಹಾಯಕ ಕಮೀಷನರ್ ಅವರು ಉಪಸ್ಥಿತಿಯಲ್ಲಿ ಅವಿಶ್ವಾಸ ಸೂಚನೆ ನಿರ್ಣಯ ಸಭೆ ನಡೆಯಿತು. ಅಧ್ಯಕ್ಷರ ವಿರುದ್ಧ 7 ಮಂದಿ ಹಾಗೂ ಅಧ್ಯಕ್ಷರ ಪರ ಒಬ್ಬರು ಕೈ ಎತ್ತಿ ಬೆಂಬಲ ಸೂಚಿಸಿದರು. ಇದರಿಂದಾಗಿ ಅಧ್ಯಕ್ಷ ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ.
ಉಪಾಧ್ಯಕ್ಷ ಸ್ಥಾನದಲ್ಲಿದ್ದ ಪೂರ್ಣಾಕ್ಷ ರವರು ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Related posts

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya
error: Content is protected !!