26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು, ಪದೇ ಪದೇ ಸುರಿಯುತ್ತಿರುವ ಮಳೆಯಿಂದ ಹೊಂಡಗಳು‌ ನೀರಿನಿಂದ ತುಂಬಿದ್ದು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ಪಾದಚಾರಿಗಳು ಸಂಚಾರಕ್ಕೆ ತುಂಬಾ ತೊಂದರೆಗಳನ್ನು ಅನುಭವಿಸುವಂತಾಗಿದೆ.

ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಡಿ. 13 ರಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟಣೆಯನ್ನು ಮಾಡಲಾಯಿತು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರಸ್ತಾವಿಕ ಮಾತುಗಳನ್ನಾಡಿದ ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಜನ ಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು ಒಂದು ತಿಂಗಳೊಳಗೆ ಕೆಲಸ ಆರಂಭವಾಗದಿದ್ದರೆ ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವುದೆಂದು ಎಚ್ಚರಿಸಿದರು.


ಸಭೆಯನ್ನು ಉದ್ದೇಶಿಸಿ ಕಣಿಯೂರು ಬ್ಲಾಕ್ ಸಮಿತಿಯ ಅಧ್ಯಕ್ಷ ಮುಸ್ತಾಫ ಪೇರ್ನೆ ಮತ್ತು ಫೈಝಲ್ ಮೂರು ಗೋಳಿ ಮಾತನಾಡಿದರು. ಬ್ಲಾಕ್ ಉಪಾಧ್ಯಕ್ಷ ನಜೀರ್ ಬೂತಿನ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಸಮ್ಮದ್ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!