25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು, ಪದೇ ಪದೇ ಸುರಿಯುತ್ತಿರುವ ಮಳೆಯಿಂದ ಹೊಂಡಗಳು‌ ನೀರಿನಿಂದ ತುಂಬಿದ್ದು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ಪಾದಚಾರಿಗಳು ಸಂಚಾರಕ್ಕೆ ತುಂಬಾ ತೊಂದರೆಗಳನ್ನು ಅನುಭವಿಸುವಂತಾಗಿದೆ.

ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಡಿ. 13 ರಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟಣೆಯನ್ನು ಮಾಡಲಾಯಿತು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರಸ್ತಾವಿಕ ಮಾತುಗಳನ್ನಾಡಿದ ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಜನ ಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು ಒಂದು ತಿಂಗಳೊಳಗೆ ಕೆಲಸ ಆರಂಭವಾಗದಿದ್ದರೆ ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವುದೆಂದು ಎಚ್ಚರಿಸಿದರು.


ಸಭೆಯನ್ನು ಉದ್ದೇಶಿಸಿ ಕಣಿಯೂರು ಬ್ಲಾಕ್ ಸಮಿತಿಯ ಅಧ್ಯಕ್ಷ ಮುಸ್ತಾಫ ಪೇರ್ನೆ ಮತ್ತು ಫೈಝಲ್ ಮೂರು ಗೋಳಿ ಮಾತನಾಡಿದರು. ಬ್ಲಾಕ್ ಉಪಾಧ್ಯಕ್ಷ ನಜೀರ್ ಬೂತಿನ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಸಮ್ಮದ್ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು.

Related posts

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!