27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿ 12 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಛಾಯಾ ಕಾರ್ಯದರ್ಶಿ ವೆಂಕಟೇಶ್ ಭಟ್ ಬೆಳಾಲು, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಉಪಸ್ಥಿತರಿದ್ದರು.

ವಲಯದ ಮಾಜಿ ಅಧ್ಯಕ್ಷ ಕೆ ವಸಂತ್ ಶರ್ಮ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮುದ್ದು ಕಂದ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಎಝಲ್ ಬಿಯಾoಕ, ದ್ವಿತೀಯ ಜಾಹ್ನವಿ ರೈ, ತೃತೀಯ ಆನ್ಶಿ ಶೆಟ್ಟಿ , ಬಹುಮಾನ ಪಡೆದರು ಹಾಗೂ ಮೆಚ್ಚುಗೆ ಗಳಿಸಿದ ಚಿತ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಛಾಯ ಕಾರ್ಯದರ್ಶಿ ವೆಂಕಟೇಶ್ ಭಟ್ ಸ್ವಾಗತಿಸಿ ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ವಲಯದ ಮಾಧ್ಯಮ ಪ್ರತಿನಿಧಿ ರಂಜನ್ ನೆರಿಯ ಧನ್ಯವಾದ ವಿತ್ತರು

Related posts

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!