25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ನಿಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77ವ) ಡಿ.14 ರಂದು ನಿಧನರಾಗಿದ್ದಾರೆ.

ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ.ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ಬೆಳ್ತಂಗಡಿಯಲ್ಲಿ ಅರುವ ನಾರಾಯಣ ಶೆಟ್ಟಿ ಅವರ ಅಳದಂಗಡಿ ಮೇಳದಲ್ಲಿ ಪತಿ ಹರಿನಾರಾಯಣ ಬೈಪಾಡಿತ್ತಾಯ ಅವರರೊಂದಿಗೆ ಭಾಗವತಿಕೆ ಮಾಡಿ ಹಲವು ಯಕ್ಷಗಾನ ಕಲಾವಿದರನ್ನು ಕುಣಿಸಿ ಆ ಕಾಲದಲ್ಲಿ ಖ್ಯಾತಿ ಪಡೆದಿದ್ದರು. ಲೀಲಾವತಿ ಅಮ್ಮನವರ ಪದ್ಯ ಇದೆ ಎಂದು ಅನೇಕರು ಯಕ್ಷಗಾನಗಳಿಗೆ ಬರುತ್ತಿದ್ದರು.ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.

ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು. ಪತ್ರಕರ್ತ ಅವಿನಾಶ್ ಹಾಗೂ ಗುರುಪ್ರಸಾದ್ ಅವರ ಪುತ್ರರು.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!