ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!