23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!