26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya
error: Content is protected !!