ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!