July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

ಸುಲ್ಕೇರಿ : ಪರಿಶ್ರಮ ಮತ್ತು ತ್ಯಾಗದಿಂದ ಸಾಧನೆಯ ಶಿಖರವನ್ನು ಮುಟ್ಟಬಹುದು ಎಂದು ಸುಲ್ಕೇರಿ ಶ್ರೀರಾಮ ಶಾಲೆಯ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹೇಳಿದರು.

ಅವರು ಡಿ. 13 ರಂದು ಸುಲ್ಕೇರಿ ಶ್ರೀರಾಮ ಶಾಲೆಯ ಸಾಂಸ್ಕೃತಿಕ ವೈಭವದ ಅಂಗವಾಗಿ ಕ್ರೀಡಾ ಕಲರವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕ್ರೀಡಾ ಕಲರವ ಇದರ ಉದ್ಘಾಟನೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಸುಲ್ಕೇರಿ ನೇರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಮಹಮ್ನಾಯಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುನೀಲ್ ಪೂಜಾರಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ, ಸುಲ್ಕೇರಿ ಗ್ರಾ.ಪಂ ಸದಸ್ಯ ನಾರಾಯಣ ಪೂಜಾರಿ,ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪಾರ್ಶ್ವನಾಥ ಜೈನ್, ಸುದ್ದಿ ಉದಯ ವಾರಪತ್ರಿಕೆಯ ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ,ವಾಣಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಹರೀಶ್,ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್ ಎಸ್ ಮಾಲಗೊಂಡ ಉಪಸ್ಥಿತರಿದ್ದರು.

ಶಾಲಾ ದೈಹಿಕ ಶಿಕ್ಷಕಿ ಜೈಶಾ ಸ್ವಾಗತಿಸಿ,ಶಿಕ್ಷಕಿ ಹೇಮಾಲತ ನಿರೂಪಿಸಿ, ಶಿಕ್ಷಕ ಸತೀಶ್ ವಂದಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸಹಕರಿಸಿದರು.

ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya
error: Content is protected !!