ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!