July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya
error: Content is protected !!