24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರನ್ನು ಆಯ್ಕೆ ಮಾಡಲಾಗಿದೆ .

ಡಿ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಇಡೀ ರಾಜ್ಯಮಟ್ಟದಲ್ಲಿ ತನ್ನದೇ ಆದ ಹೊಸ ಹೊಸ ಯೋಜನೆಗಳ ಮುಖಾಂತರ ಯುವ ಜನರಿಗೆ ಸ್ಪೂರ್ತಿದಾಯಕ ಕೆಲಸಗಳೊಂದಿಗೆ ತನ್ನದೇ ಆದ ವಿಶಿಷ್ಟ ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ಮಾದರಿಯುತವಾದ ರಕ್ತದಾನ, ಸ್ವಚ್ಛಾಲಯ, ಸರಕಾರಿ ಶಾಲೆ, ಉಳಿಸಿ ಬೆಳೆಸಿ, ಸ್ವಚ್ಛತಾ ಕಾರ್ಯಕ್ರಮ, ಶೈಕ್ಷಣಿಕ ಕ್ರೀಡೆ ಶಿಕ್ಷಣ ಹಾಗೂ ಹಲವಾರು ಕಾರ್ಯಕ್ರಮಗಳೊಂದಿಗೆ ರಾಜ್ಯದ ಜನತೆಯ ಸೇವೆಗಾಗಿ ಮುಡಿಪಾಗಿಟ್ಟಿರುವಂತಹ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕದ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಎಸ್ ರವೀಂದ್ರ ಅವರು ತಿಳಿಸಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!