April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!