25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!