July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya
error: Content is protected !!