23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
error: Content is protected !!