25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ.

ಡಿ 27 ರಿಂದ 29 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿರುವುದು.

ಇವರು ಕಳೆದ 40 ವರ್ಷಗಳಿಂದ ವೈದಿಕ ಪೌರೋಹಿತ್ಯ ವೃತ್ತಿಯಲ್ಲಿದ್ದು,.ವೇದಬ್ರಹ್ಮ ಪಳ್ಳತ್ತಡ್ಕ ವಿಶ್ವೇಶ್ವರ ಭಟ್
ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ವೇದಮೂರ್ತಿ ಕೇಶವ ಜೋಯಿಶ್ ಕರುವಜೆ ಇವರ ಶಿಷ್ಯ.

ಏಳು ವರ್ಷಗಳ ಕಾಲ ವರದಹಳ್ಳಿ ಶ್ರೀಧರಾಶ್ರಮದಲ್ಲಿ ಸಂಪೂರ್ಣ ಕೃಷ್ಣ ಪೌರೋಹಿತ್ಯದ ಜೊತೆಗೆ ಅನೇಕ ಶಿಷ್ಯರನ್ನು ತಯಾರು ಮಾಡಿ ಸಮಾಜಕ್ಕೆ ಕೊಡುಗೆಯನ್ನಾಗಿ ನೀಡಿರುತ್ತಾರೆ.

ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಅಲ್ಲದೇ ವಿದೇಶಗಳಾದ ಮಸ್ಕತ್ ಮತ್ತು ಶ್ರೀಲಂಕಾದಲ್ಲೂ ಪೌರೋಹಿತ್ಯದ ನೇತೃತ್ವ ವಹಿಸಿಕೊಂಡಿರುವುದು ಇವರ ವಿಶೇಷತೆ. ಮತ್ತು ಇವರ ಮಗ ಈಶ್ವರ ಶರ್ಮ, ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya
error: Content is protected !!