25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ.

ಡಿ 27 ರಿಂದ 29 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿರುವುದು.

ಇವರು ಕಳೆದ 40 ವರ್ಷಗಳಿಂದ ವೈದಿಕ ಪೌರೋಹಿತ್ಯ ವೃತ್ತಿಯಲ್ಲಿದ್ದು,.ವೇದಬ್ರಹ್ಮ ಪಳ್ಳತ್ತಡ್ಕ ವಿಶ್ವೇಶ್ವರ ಭಟ್
ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ವೇದಮೂರ್ತಿ ಕೇಶವ ಜೋಯಿಶ್ ಕರುವಜೆ ಇವರ ಶಿಷ್ಯ.

ಏಳು ವರ್ಷಗಳ ಕಾಲ ವರದಹಳ್ಳಿ ಶ್ರೀಧರಾಶ್ರಮದಲ್ಲಿ ಸಂಪೂರ್ಣ ಕೃಷ್ಣ ಪೌರೋಹಿತ್ಯದ ಜೊತೆಗೆ ಅನೇಕ ಶಿಷ್ಯರನ್ನು ತಯಾರು ಮಾಡಿ ಸಮಾಜಕ್ಕೆ ಕೊಡುಗೆಯನ್ನಾಗಿ ನೀಡಿರುತ್ತಾರೆ.

ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಅಲ್ಲದೇ ವಿದೇಶಗಳಾದ ಮಸ್ಕತ್ ಮತ್ತು ಶ್ರೀಲಂಕಾದಲ್ಲೂ ಪೌರೋಹಿತ್ಯದ ನೇತೃತ್ವ ವಹಿಸಿಕೊಂಡಿರುವುದು ಇವರ ವಿಶೇಷತೆ. ಮತ್ತು ಇವರ ಮಗ ಈಶ್ವರ ಶರ್ಮ, ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!