25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ.

ಡಿ 27 ರಿಂದ 29 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿರುವುದು.

ಇವರು ಕಳೆದ 40 ವರ್ಷಗಳಿಂದ ವೈದಿಕ ಪೌರೋಹಿತ್ಯ ವೃತ್ತಿಯಲ್ಲಿದ್ದು,.ವೇದಬ್ರಹ್ಮ ಪಳ್ಳತ್ತಡ್ಕ ವಿಶ್ವೇಶ್ವರ ಭಟ್
ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ವೇದಮೂರ್ತಿ ಕೇಶವ ಜೋಯಿಶ್ ಕರುವಜೆ ಇವರ ಶಿಷ್ಯ.

ಏಳು ವರ್ಷಗಳ ಕಾಲ ವರದಹಳ್ಳಿ ಶ್ರೀಧರಾಶ್ರಮದಲ್ಲಿ ಸಂಪೂರ್ಣ ಕೃಷ್ಣ ಪೌರೋಹಿತ್ಯದ ಜೊತೆಗೆ ಅನೇಕ ಶಿಷ್ಯರನ್ನು ತಯಾರು ಮಾಡಿ ಸಮಾಜಕ್ಕೆ ಕೊಡುಗೆಯನ್ನಾಗಿ ನೀಡಿರುತ್ತಾರೆ.

ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಅಲ್ಲದೇ ವಿದೇಶಗಳಾದ ಮಸ್ಕತ್ ಮತ್ತು ಶ್ರೀಲಂಕಾದಲ್ಲೂ ಪೌರೋಹಿತ್ಯದ ನೇತೃತ್ವ ವಹಿಸಿಕೊಂಡಿರುವುದು ಇವರ ವಿಶೇಷತೆ. ಮತ್ತು ಇವರ ಮಗ ಈಶ್ವರ ಶರ್ಮ, ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya
error: Content is protected !!