25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya
error: Content is protected !!