28.6 C
ಪುತ್ತೂರು, ಬೆಳ್ತಂಗಡಿ
March 31, 2025
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

ಬೆಳ್ತಂಗಡಿ: ತುಳುನಾಡಿನಲ್ಲಿ ಹಿಂದಿನ ಕಾಲದಲ್ಲಿ ಗ್ರಾಮೀಣ ಜನರ ಮೇಲಾಗುತ್ತಿದ್ದ ದಬ್ಬಾಳಿಕೆ, ದೌರ್ಜನ್ಯದ ಕಥಾನಕವನ್ನೇ ಪೋಣಿಸಿ ಸಿದ್ದಪಡಿಸಿದ ಹಾಗೂ ತುಳು ಸಿನೆಮಾ ರಂಗದಲ್ಲಿ ಹೊಸ ಪ್ರಯೋಗವನ್ನು ಬರೆದ ‘ದಸ್ಕತ್’ ಸಿನೆಮಾ ಕರಾವಳಿಯ ಥಿಯೇಟರ್‌ಗಳಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಪಂಚಾಯತ್ ಅಧಿಕಾರಿಯೊಬ್ಬನ ದಸ್ತತ್‌ಗಾಗಿ ಜನರ ಪಾಡನ್ನು ವಿಭಿನ್ನ ನೆಲೆಯಿಂದ ಮೂಡಿಸಿದ ಸಿನೆಮಾ, ತುಳುನಾಡಿನ ಗ್ರಾಮೀಣ ಬದುಕಿನ ಸಂಕಟದ ಕಥಾನಕವನ್ನು ಪ್ರದರ್ಶಿಸಿದೆ. ಆರಂಭದಿಂದ ಕೊನೆಯವರೆಗೂ ಹಲವು ತಿರುವುಗಳೊಂದಿಗೆ ಸಾಗುವ ಈ ಸಿನಿಮಾ, ಬಿಡುಗಡೆಯಾದ ಮೊದಲ ದಿನವೇ ಯಶಸ್ವಿ ಪ್ರದರ್ಶನದ ಮೂಲಕ ಗಮನ ಸೆಳೆದಿದೆ.

ಚಿತ್ರದ ಬಿಡುಗಡೆ ಸಮಾರಂಭವು ಬಿಗ್ ಸಿನೆಮಾಸ್‌ನಲ್ಲಿ ಬೆಳಿಗ್ಗೆ ಹಾಗೂ ಸಂಜೆ ಬೆಳ್ತಂಗಡಿ ಚಿತ್ರಮಂದಿರದಲ್ಲಿ
ಡಿ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಪ್ರಮುಖರಾದ ರಾಘವೇಂದ್ರ ಕುಡ್ವ ಜಗದೀಶ್ ಅಧಿಕಾರಿ,ಜಯಂತ್ ಕೋಟ್ಯಾನ್ ಮರೋಡಿ, ಪ್ರಶಾಂತ್ ಎಂ ಪಾರೆಂಕಿ,ರತ್ನಾಕರ ಬುಣ್ಣನ್,ಜಗನ್ನಾಥ ಶೆಟ್ಟಿ,ಕಲಾವಿದ ಹಿತೇಶ್ ಕಾಪಿನಡ್ಕ, ಉಮೇಶ್ ಕುಲಾಲ್,ಚಂದ್ರ ಮೇಲಂತಬೆಟ್ಟು,ಬಾಲಕೃಷ್ಣ ಶೆಟ್ಟಿ ತೆಂಕಕಾರಂದೂರು, ವಿನಯಚ್ಚಂದ್ರ ಕೆನಾರ ಸ್ಟೈನ್ ಲೆಸ್,ಸೂರಜ್ ಕಲ್ಯ, ಬಿ.ಎಸ್ ಕುಲಾಲ್,ತುಕರಾಮ್ ಬಿ, ಸಂತೋಷ್ ಪಿ ಕೋಟ್ಯಾನ್ ಬಳಂಜ,ಕೊರಗಪ್ಪ,ವಿನೋದ್ ರಾಜ್, ಅನೀಶ್ ಪೂಜಾರಿ, ಸ್ಮಿತೇಶ್ ಬಾರ್ಯ,ಸಮರ್ಥನ್ ರಾವ್,ಜಗದೀಶ್ ಕನ್ನಾಜೆ, ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಚಿತ್ರದ ನಟ-ನಟಿಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಕಲಾವಿದರನ್ನು,ತಂಡದ ಸದಸ್ಯರನ್ನು ಗೌರವಿಸಲಾಯಿತು.

Related posts

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!