28.2 C
ಪುತ್ತೂರು, ಬೆಳ್ತಂಗಡಿ
September 9, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

ಬೆಳ್ತಂಗಡಿ: ತುಳುನಾಡಿನಲ್ಲಿ ಹಿಂದಿನ ಕಾಲದಲ್ಲಿ ಗ್ರಾಮೀಣ ಜನರ ಮೇಲಾಗುತ್ತಿದ್ದ ದಬ್ಬಾಳಿಕೆ, ದೌರ್ಜನ್ಯದ ಕಥಾನಕವನ್ನೇ ಪೋಣಿಸಿ ಸಿದ್ದಪಡಿಸಿದ ಹಾಗೂ ತುಳು ಸಿನೆಮಾ ರಂಗದಲ್ಲಿ ಹೊಸ ಪ್ರಯೋಗವನ್ನು ಬರೆದ ‘ದಸ್ಕತ್’ ಸಿನೆಮಾ ಕರಾವಳಿಯ ಥಿಯೇಟರ್‌ಗಳಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಪಂಚಾಯತ್ ಅಧಿಕಾರಿಯೊಬ್ಬನ ದಸ್ತತ್‌ಗಾಗಿ ಜನರ ಪಾಡನ್ನು ವಿಭಿನ್ನ ನೆಲೆಯಿಂದ ಮೂಡಿಸಿದ ಸಿನೆಮಾ, ತುಳುನಾಡಿನ ಗ್ರಾಮೀಣ ಬದುಕಿನ ಸಂಕಟದ ಕಥಾನಕವನ್ನು ಪ್ರದರ್ಶಿಸಿದೆ. ಆರಂಭದಿಂದ ಕೊನೆಯವರೆಗೂ ಹಲವು ತಿರುವುಗಳೊಂದಿಗೆ ಸಾಗುವ ಈ ಸಿನಿಮಾ, ಬಿಡುಗಡೆಯಾದ ಮೊದಲ ದಿನವೇ ಯಶಸ್ವಿ ಪ್ರದರ್ಶನದ ಮೂಲಕ ಗಮನ ಸೆಳೆದಿದೆ.

ಚಿತ್ರದ ಬಿಡುಗಡೆ ಸಮಾರಂಭವು ಬಿಗ್ ಸಿನೆಮಾಸ್‌ನಲ್ಲಿ ಬೆಳಿಗ್ಗೆ ಹಾಗೂ ಸಂಜೆ ಬೆಳ್ತಂಗಡಿ ಚಿತ್ರಮಂದಿರದಲ್ಲಿ
ಡಿ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಪ್ರಮುಖರಾದ ರಾಘವೇಂದ್ರ ಕುಡ್ವ ಜಗದೀಶ್ ಅಧಿಕಾರಿ,ಜಯಂತ್ ಕೋಟ್ಯಾನ್ ಮರೋಡಿ, ಪ್ರಶಾಂತ್ ಎಂ ಪಾರೆಂಕಿ,ರತ್ನಾಕರ ಬುಣ್ಣನ್,ಜಗನ್ನಾಥ ಶೆಟ್ಟಿ,ಕಲಾವಿದ ಹಿತೇಶ್ ಕಾಪಿನಡ್ಕ, ಉಮೇಶ್ ಕುಲಾಲ್,ಚಂದ್ರ ಮೇಲಂತಬೆಟ್ಟು,ಬಾಲಕೃಷ್ಣ ಶೆಟ್ಟಿ ತೆಂಕಕಾರಂದೂರು, ವಿನಯಚ್ಚಂದ್ರ ಕೆನಾರ ಸ್ಟೈನ್ ಲೆಸ್,ಸೂರಜ್ ಕಲ್ಯ, ಬಿ.ಎಸ್ ಕುಲಾಲ್,ತುಕರಾಮ್ ಬಿ, ಸಂತೋಷ್ ಪಿ ಕೋಟ್ಯಾನ್ ಬಳಂಜ,ಕೊರಗಪ್ಪ,ವಿನೋದ್ ರಾಜ್, ಅನೀಶ್ ಪೂಜಾರಿ, ಸ್ಮಿತೇಶ್ ಬಾರ್ಯ,ಸಮರ್ಥನ್ ರಾವ್,ಜಗದೀಶ್ ಕನ್ನಾಜೆ, ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಚಿತ್ರದ ನಟ-ನಟಿಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಕಲಾವಿದರನ್ನು,ತಂಡದ ಸದಸ್ಯರನ್ನು ಗೌರವಿಸಲಾಯಿತು.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya
error: Content is protected !!