37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!