ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!