23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya
error: Content is protected !!