24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ.

ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು,ಅವರು ಸುಲ್ಕೇರಿ ಗ್ರಾಮ ಪಂಚಾಯತ್ ಎದರು ಮೈದಾನದಲ್ಲಿ ವಾಹನ ನಿಲ್ಲಿಸಿದ್ದರು. ನಿಲ್ಲಿಸಲಾಗಿದ್ದ ಟಿಪ್ಪರ್ ನ ಬ್ಯಾಟರಿ ಜೋಡಿಸುವ ಲಾಕರ್ ಮುರಿದು ಬ್ಯಾಟರಿ ಕಳವು ಮಾಡಲಾಗಿದೆ. ವಯರ್ ಕಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಕುದ್ಯಾಡಿ ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಯ 2 ಬ್ಯಾಟರಿ ಕಳವಾಗಿದೆ. ಇತ್ತಿಚೆಗೆ ಸ್ಥಳಿಯ ಶಾಲೆಯಲ್ಲಿ ಕಾರ್ಯಕ್ರಮ ನಡೆದಾಗ ಜನರೇಟರ್ ನ ಬ್ಯಾಟರಿ ಕಳವು ಮಾಡಲಾಗಿದೆ.ಸಿದ್ದಿ ವಿನಾಯಕ ಅರ್ಥ್ ಮೂವರ್ಸ್ ನ ಬ್ಯಾಟರಿ ಕೂಡ ಕಳವಾಗಿದೆ.ಈ ಸಂಬಂಧ ವೇಣೂರು ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾದ ಬ್ಯಾಟರಿಗಳ ಮೌಲ್ಯ ರೂ. 50 ಸಾವಿರ ಎಂದು ಅಂದಾಜಿಸಲಾಗಿದೆ. ಸುಲ್ಕೇರಿ, ಕುದ್ಯಾಡಿ, ಕುತ್ಲೂರು, ಪಿಲ್ಯ ಪರಿಸರದ ರಸ್ತೆ ಬದಿ ವಾಹನ ನಿಲ್ಲಿಸುವರು ಜಾಗ್ರತೆ ವಹಿಸುವುದು ಮುಖ್ಯ. ವಾಹನದ ಬ್ಯಾಟರಿ ಕಳ್ಳರಿದ್ದಾರೆ ಎಚ್ಚರಿಕೆ ಎಂದು ತಿಳಿಸಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
error: Content is protected !!